Western Ghat voice: ಆರು ಜಿಲ್ಲೆಗಳಲ್ಲಿ ಭೂಕುಸಿತ ತಡೆಗೆ 400 ಕೋಟಿ ರೂ. ಯೋಜನೆ!


Western Ghat voice:ಬೆಂಗಳೂರು: ಪಶ್ಚಿಮ ಘಟ್ಟ ಪ್ರದೇಶದ ಜಿಲ್ಲೆಗಳನ್ನು ಕೆಲವು ವರ್ಷಗಳಿಂದ ಕಾಡುತ್ತಿರುವ ಭೂ ಕುಸಿತ ಸಮಸ್ಯೆ ತಡೆಯುವುದಕ್ಕೆ ಕಂದಾಯ ಇಲಾಖೆ 2.5 ವರ್ಷಗಳ “ಮಾಸ್ಟರ್‌ ಪ್ಲ್ರಾನ್‌’ ಸಿದ್ಧಪಡಿಸಿದ್ದು, ಒಟ್ಟು 400 ಕೋಟಿ ರೂ. ವೆಚ್ಚದಲ್ಲಿ ಶಾಶ್ವತ ಪರಿಹಾರ ರೂಪಿಸುವುದಕ್ಕೆ ಮುಂದಾಗಿದೆ. ಇದಕ್ಕಾಗಿ ಮೊದಲ ಹಂತದಲ್ಲಿ 150 ಕೋಟಿ ರೂ. ಬಿಡುಗಡೆ ಮಾಡುವುದಕ್ಕೆ ಸರಕಾರ ಹಸುರು ನಿಶಾನೆ ತೋರಿದೆ.

ಕೆಲವು ವರ್ಷಗಳಿಂದ ಪಶ್ಚಿಮಘಟ್ಟ ವ್ಯಾಪ್ತಿಯ ದಕ್ಷಿಣಕನ್ನಡ, ಉಡುಪಿ, ಕೊಡಗು, ಉತ್ತರ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು ಹಾಗೂ ಹಾಸನ ಜಿಲ್ಲೆಯ ಕೆಲವು ಪ್ರದೇಶಗಳಲ್ಲಿ ಭೂಕುಸಿತ ಪ್ರಕರಣಗಳು ಜನರಲ್ಲಿ ತೀವ್ರ ಆತಂಕ ಉಂಟು ಮಾಡಿವೆ. ಕಳೆದ ವರ್ಷ ನಡೆದ ಶಿರೂರು ಗುಡ್ಡ ಕುಸಿತ ಪ್ರಕರಣವಂತೂ ಅವೈಜ್ಞಾನಿಕ ಅಭಿವೃದ್ಧಿ ಕಾಮಗಾರಿಗಳ ದುಷ್ಪರಿಣಾಮಕ್ಕೆ ಉದಾಹರಣೆಯಾಗಿದೆ. ಈ ಹಿನ್ನೆಲೆಯಲ್ಲಿ ಕಂದಾಯ ಇಲಾಖೆ ಭೂ ಕುಸಿತ ತಡೆಯುವುದಕ್ಕಾಗಿ ಶಾಶ್ವತ ಪರಿಹಾರ ಕ್ರಮಗಳನ್ನು ಹುಡುಕುವುದಕ್ಕೆ ಮುಂದಾಗಿದ್ದು, ಎಸ್‌ಡಿಎಂಎಫ್ (ಸ್ಟೇಟ್‌ ಡಿಸಾಸ್ಟರ್‌ ಮಿಟಿಗೇಶನ್‌ ಫ‌ಂಡ್‌) ಹಾಗೂ ವಿಶ್ವಬ್ಯಾಂಕ್‌ ನೆರವಿನೊಂದಿಗೆ ಈ ಯೋಜನೆ ರೂಪಿಸಿದೆ.

ಕೆಲವು ವರ್ಷಗಳಿಂದ ಪಶ್ಚಿಮಘಟ್ಟ ವ್ಯಾಪ್ತಿಯ ದಕ್ಷಿಣಕನ್ನಡ, ಉಡುಪಿ, ಕೊಡಗು, ಉತ್ತರ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು ಹಾಗೂ ಹಾಸನ ಜಿಲ್ಲೆಯ ಕೆಲವು ಪ್ರದೇಶಗಳಲ್ಲಿ ಭೂಕುಸಿತ ಪ್ರಕರಣಗಳು ಜನರಲ್ಲಿ ತೀವ್ರ ಆತಂಕ ಉಂಟು ಮಾಡಿವೆ. ಕಳೆದ ವರ್ಷ ನಡೆದ ಶಿರೂರು ಗುಡ್ಡ ಕುಸಿತ ಪ್ರಕರಣವಂತೂ ಅವೈಜ್ಞಾನಿಕ ಅಭಿವೃದ್ಧಿ ಕಾಮಗಾರಿಗಳ ದುಷ್ಪರಿಣಾಮಕ್ಕೆ ಉದಾಹರಣೆಯಾಗಿದೆ. ಈ ಹಿನ್ನೆಲೆಯಲ್ಲಿ ಕಂದಾಯ ಇಲಾಖೆ ಭೂ ಕುಸಿತ ತಡೆಯುವುದಕ್ಕಾಗಿ ಶಾಶ್ವತ ಪರಿಹಾರ ಕ್ರಮಗಳನ್ನು ಹುಡುಕುವುದಕ್ಕೆ ಮುಂದಾಗಿದ್ದು, ಎಸ್‌ಡಿಎಂಎಫ್ (ಸ್ಟೇಟ್‌ ಡಿಸಾಸ್ಟರ್‌ ಮಿಟಿಗೇಶನ್‌ ಫ‌ಂಡ್‌) ಹಾಗೂ ವಿಶ್ವಬ್ಯಾಂಕ್‌ ನೆರವಿನೊಂದಿಗೆ ಈ ಯೋಜನೆ ರೂಪಿಸಿದೆ.



PGK

Post a Comment

Previous Post Next Post