*ಪಶ್ಚಿಮ ಘಟ್ಟ ವಾಯ್ಸ್ ಡೈಲಿ ನ್ಯೂಸ್ * ಚಿಕ್ಕಮಗಳೂರು: ಮಹಿಳೆ ಬಳಿ ಕುರಿಗಳನ್ನು ಖರೀದಿಸಿ ನಕಲಿ ನೋಟು ನೀಡಿದ ಆರೋಪಿಗಳು

*ಪಶ್ಚಿಮ ಘಟ್ಟ ವಾಯ್ಸ್ ಡೈಲಿ ನ್ಯೂಸ್ *  ಚಿಕ್ಕಮಗಳೂರು, ಏಪ್ರಿಲ್ 18: ಕುರಿ ಸಾಕಾಣಿಕೆ (Sheep farming) ಯಿಂದ ಅನೇಕರು ಜೀವನ ಕಟ್ಟಿಕೊಂಡಿದ್ದಾರೆ. ಕುರಿ ಹಾಲು ಮತ್ತು ಕುರಿಗಳನ್ನು ಮಾರಿ ಅನೇಕ ಕುರಿಗಾಹಿಗಳು (Shepherd) ತಮ್ಮ ಸಂಸಾರದ ಬಂಡಿಯನ್ನು ಸಾಗಿಸುತ್ತಿದ್ದಾರೆ. ಇದರಂತೆ, ಕಡೂರು ತಾಲೂಕಿನ ನಿಢಘಟ್ಟ ಗ್ರಾಮದ ಮಹಿಳೆಯೊಬ್ಬರು ಕುರಿ ಸಾಕಾಣಿಕೆ ಮಾಡಿ ಇದರಿಂದ ಬಂದ ಲಾಭದಲ್ಲಿ ತಮ್ಮ ಜೀವನ ನಡೆಸುತ್ತಿದ್ದಾರೆ. ಆದರೆ, ಯಾರೋ ಅಪರಿಚಿತರು ಈ ಮಹಿಳೆಯಿಂದ ಕುರಿಗಳನ್ನು ಖರೀದಿಸಿ, ಅವರಿಗೆ ಖೋಟಾ ನೀಡಿ ಪರಾರಿಯಾಗಿದ್ದಾರೆ.

ಉತ್ತರ ಕನ್ನಡ ಜಿಲ್ಲೆ ಬೆನ್ನಲ್ಲೇ ಚಿಕ್ಕಮಗಳೂರು ಜಿಲ್ಲೆಯಲ್ಲೂ ಖೋಟಾ ನೋಟು ಜನರ ಕೈಯಲ್ಲಿ ಹರಿದಾಡುತ್ತಿವೆ. ಕಡೂರು ತಾಲೂಕಿನ ನಿಡಘಟ್ಟ ಗ್ರಾಮದ ಹೇಮಾವತಿ ಎಂಬವರ ಬಳಿ ಅಪರಿಚಿತರು ಕುರಿಗಳನ್ನು ಖರೀದಿಸಿ, ಅವರಿಗೆ ಖೋಟಾ ನೋಟು ನೀಡಿದ್ದಾರೆ. ಕುರಿಗಳನ್ನು ಮಾರಿ ಬಂದ ಹಣವನ್ನು ಹೇಮಾವತಿಯವರು ಎಸ್​ಬಿಐ ಬ್ಯಾಂಕ್​ನಲ್ಲಿರುವ ತಮ್ಮ ಖಾತೆಗೆ ಜಮೆ ಮಾಡಲು ಹೋಗಿದ್ದಾಗ ಖೋಟಾ ನೋಟು ಎಂದು ತಿಳಿದಿದೆ.

ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ನಿಡಘಟ್ಟದ ಹೇಮಾವತಿ ಎಂಬ ಮಹಿಳೆ ಕುರಿ ಸಾಕಾಣಿಕೆಯಿಂದ ಜೀವನ ನಡೆಸುತ್ತಿದ್ದಾರೆ. ಹೇಮಾವತಿ ಅವರ ಬಳಿ ಅಪರಿಚಿತ ವ್ಯಕ್ತಿಗಳು 25 ಸಾವಿರ ರೂಪಾಯಿಗೆ ಕುರಿಗಳನ್ನು ಖರೀದಿಸಿದ್ದಾರೆ. ಆದರೆ, ಹೇಮಾವತಿಯವರಿಗೆ ಖೋಟಾ ನೋಟುಗಳನ್ನು ನೀಡಿದ್ದಾರೆ. ಹೇಮಾವತಿಯವರು ಬ್ಯಾಂಕ್ಗೆ ಹಣ ಜಮೆ ಮಾಡಲು ತೆರಳಿದಾಗ ಖೋಟಾ ನೋಟುಗಳು ಎಂದು ತಿಳಿದುಬಂದಿದೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

ಹೇಮಾವತಿ ಅವರು 25 ಸಾವಿರ ರೂಪಾಯಿಗೆ ಕುರಿಗಳನ್ನು ಮಾರಿದ್ದರು. ಈ ಹಣವನ್ನು ಹೇಮಾವತಿಯವರು ಬ್ಯಾಂಕ್​ಗೆ ಜಮೆ ಮಾಡಲು ತೆರಳಿದ್ದಾರೆ. ಈ 25 ಸಾವಿರ ರೂಪಾಯಿಯಲ್ಲಿ 14 ಸಾವಿರ ರೂಪಾಯಿಯಷ್ಟು ನೋಟುಗಳು ಖೋಟಾ ಆಗಿವೆ. 500 ರೂ. ಮುಖಬೆಲೆಯ 28 ನೋಟುಗಳು ನೋಟುಗಳು ನಕಲಿ ಎಂದು ಬ್ಯಾಂಕ್​ ಸಿಬ್ಬಂದಿ ಮಹಿಳೆಗೆ ತಿಳಿಸಿದ್ದಾರೆ.


PGK

Post a Comment

Previous Post Next Post